ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಅಹ್ವಾನ : ಅರ್ಹರು ಇಂದೇ ಅರ್ಜಿ ಸಲ್ಲಿಸಿ

Published On: September 17, 2025
Follow Us
klwb-applications-invited-for-educational-assistance-application

ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕವಾಗಿ ಸಹಾಯ ಹಸ್ತ ನೀಡಲು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2025-26 ನೇ ಸಾಲಿಗೆ ಪ್ರೋತ್ಸಾಹಧನ ನೀಡಲು ಮುಂದಾಗಿದೆ. ಅರ್ಹ ಅಭ್ಯರ್ಥಿಗಳು ಡಿಸೇಂಬರ್ 30, 2025 ರ ಒಳಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ಪ್ರೌಢಶಾಲೆ ಅಧ್ಯಯನ ಮಾಡುತ್ತಿರುವವರಿಂದ ಹಿಡಿದು ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್ ಗಳಲ್ಲಿ ಅಧ್ಯಯನದಲ್ಲಿ ತೊಡಗಿರುವವ ವಿದ್ಯಾರ್ಥಿಗಳು ಈ ಯೋಜನೆಯ ಒಳಗೆ ಬರುತ್ತಾರೆ. ಇದಲ್ಲದೇ  ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗದ ಮಕ್ಕಳು ಶೇ.50 ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಕನಿಷ್ಠ ಶೇ.45  ಅಂಕಗಳೊಂದಿಗೆ ಉತ್ತೀರ್ಣರಾಗಿರುವುದು ಅವಶ್ಯವಾಗಿದೆ.

ಶೈಕ್ಷಣಿಕ ಪ್ರೋತ್ಸಾಹಧ ಯೋಜನೆಯ ಲಾಭ ಪಡೆಯಲು ಅರ್ಹತೆಗಳು

  • ಪ್ರೌಢಶಾಲೆ, ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ, ಇಂಜಿನಿಯರಿಂಗ್ ಓದುತ್ತಿರುವವರು ಅರ್ಜಿಯನ್ನು ಸಲ್ಲಿಸಬಹುದು .
  • ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳು ಹಿಂದಿನ ವರ್ಷ ಸಾಮಾನ್ಯ ವರ್ಗದ ಮಕ್ಕಳು ಶೇ.50 ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಕನಿಷ್ಠ ಶೇ.45  ಅಂಕಗಳೊಂದಿಗೆ ಉತ್ತೀರ್ಣರಾಗಿರುವುದು ಅವಶ್ಯವಾಗಿದೆ.
  • ಕಾರ್ಮಿಕರ ಮಾಸಿಕ ವೇತನ ರೂ. 35,000/- ಒಳಗಿರಬೇಕು.
  • ಒಂದೇ ಕುಟುಂಬದ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯ ಪಡೆದುಕೊಳ್ಳಲು ಅವಕಾಶವಿದೆ.

ಕರ್ನಾಟಕ ಜೀವವೈವಿಧ್ಯ ಮಂಡಳಿ ನೇಮಕಾತಿ 2025–ಸಲಹೆಗಾರ (ಸಸ್ಯಶಾಸ್ತ್ರ) ಹುದ್ದೆಗೆ ಅರ್ಜಿ ಸಲ್ಲಿಸಿ

ಶೈಕ್ಷಣಿಕ ಪ್ರೋತ್ಸಾಹಧ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ?

klwb-applications-invited-for-educational-assistance-application

  • ಅರ್ಜಿಯನ್ನು ಸಲ್ಲಿಸಬಯಸುವ ವಿದ್ಯಾರ್ಥಿಯು ತನ್ನ ಹಾಗೂ ತಂದೆ ತಾಯಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ಪದವಿ ,  ಸ್ನಾತಕೋತ್ತರ, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಪದವಿಯ ಅಂಕಪಟ್ಟಿಗಳನ್ನು ತೆಗೆದಿಟ್ಟುಕೊಳ್ಳಬೇಕು.
  • ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಜೊತೆಗೆ ಹಿಂದಿನ ಎರಡು ಸಾಲಿನ ಅಂಕಪಟ್ಟಿಯ ಪ್ರತಿಯನ್ನು ತೆಗೆದಿಟ್ಟುಕೊಳ್ಳಬೇಕು.
  • ತಂದೆ ತಾಯಿ ಮರಣ ಹೊಂದಿದ್ದರೆ ಮರಣ ಪ್ರಮಾಣ ಪಾತ್ರವನ್ನು ತೆಗೆದಿಟ್ಟುಕೊಳ್ಳಬೇಕು.
  • ಕೆಳಗೆ ನೀಡಲಾಗಿರುವ ಅಥವಾ ಅಧಿಕೃತ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್ ಸೈಟ್ ಗೆ ಭೇಟಿ ನೀಡಿ.
  • ಅರ್ಜಿಯನ್ನು ಸಲ್ಲಿಸಲು Student ಆಯ್ಕೆಯನ್ನು ಅಥವಾ Notifications ನಲ್ಲಿರುವ ಶೈಕ್ಷಣಿಕ ಸಹಾಯಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ ಆಯ್ಕೆಯನ್ನು ಕ್ಲಿಕ್ಕಿಸಬೇಕು.
  • ನಂತರ ಹೆಸರು, ಇ-ಮೇಲ್, ದೂರವಾಣಿ ಸಂಖ್ಯೆ ಮತ್ತು ಪಾಸ್ ವರ್ಡ್ ಬಳಸಿ Registar ಆಗಿ. ಅನಂತರ login ಮಾಡಿಕೊಳ್ಳಿ.
  • ನಂತರ ಅಲ್ಲಿ ಕೇಳಲಾದ ಸ್ವ ವಿವರ ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಪೂರೈಸಿ.
  • ಮತ್ತೊಮ್ಮೆ ಎಲ್ಲವೂ ಸರಿಯಾಗಿದೆಯೇ ಎಂದು ಪರಿಶೀಲಿಸಿಕೊಂಡು ಅರ್ಜಿ ಸಲ್ಲಿಸಿ.
  • ಅರ್ಜಿ ಸಲ್ಲಿಸಿದ ದಾಖಲಾತಿಗಾಗಿ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಟ್ಟುಕೊಳ್ಳಿ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025 – 8 ಹುದ್ದೆಗಳಿಗೆ ಅರ್ಜಿ ಆಹ್ವಾನ

ಶೈಕ್ಷಣಿಕ ಪ್ರೋತ್ಸಾಹಧ ಯೋಜನೆಯ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಕೊನೆಯ ದಿನಾಂಕ ಡಿಸೇಂಬರ್ 30, 2025 ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಿರಿ – ಕರ್ನಾಟಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ 48, 1 ನೇ ಮತ್ತು 2 ನೇ ಮಹಡಿ, ಮತ್ತಿಕೆರೆ ಮುಖ್ಯ ರಸ್ತೆ, ಯಶವಂತ್ ಪುರ ಬೆಂಗಳೂರು- 560022. ಅಥವಾ ದೂರವಾಣಿ ಸಂಖ್ಯೆ 080- 23475188 ಹಾಗೂ ಮೊಬೈಲ್ ಸಂಖ್ಯೆ 8277291175, 277120505, 9141585402, 9141602562 ಗೆ ಕರೆ ಮಾಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಶೈಕ್ಷಣಿಕ ಪ್ರೋತ್ಸಾಹಧ ಯೋಜನೆಯ ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು

ಅಧಿಕೃತ ವೆಬ್ ಸೈಟ್: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

Mahesh Kumar M.

ಮಹೇಶ್ ಕುಮಾರ್ ಎಂ. ಅವರು 2020 ರಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಧ್ಯ ಉದ್ಯೋಗ ನ್ಯೂಸ್ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ಇವರು ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.

Join WhatsApp

Join Now

Join Telegram

Join Now

Leave a comment